ಬಂಟ್ವಾಳ, ಆಗಸ್ಟ್11, 2026 (ಕರಾವಳಿ ಟೈಮ್ಸ್) : ಕಲ್ಲಡ್ಕದಲ್ಲಿ ಆಗಸ್ಟ್ 13 ರಂದು ವಾಹನ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಪ್ರಸಾರವಾಗುತ್ತಿದ್ದು, ಸದ್ರಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದಿರುವುದಿಲ್ಲ. ಸಾರ್ವಜನಿಕರ/ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತಹ ಹಾಗೂ ಪೂರ್ವಾನುಮತಿ ಪಡೆಯದೇ ವಾಹನ ಜಾಥಾಗಳಂತಹ ಯಾವುದೇ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಾಗ, ಸದ್ರಿ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಪಡೆಯಬೇಕಾದ ಪೂರ್ವಾನುಮತಿಯನ್ನು ಪಡೆಯಲಾಗಿದೆಯೇ ಎಂದು ಖಚಿತಪಡಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಎಸ್ಪಿ ಡಾ ಅರುಣ್ ಕೆ ಅವರು ತಿಳಿಸಿದ್ದಾರೆ.










0 comments:
Post a Comment