ಬೆಳ್ತಂಗಡಿ, ಆಗಸ್ಟ್ 31, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಕೇರಳ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಎಂಬಾತನನ್ನು ಆಗಸ್ಟ್ 29 ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮುನಿಯ ನಾಯ್ಕ, ಮನು ನಾಯ್ಕ ಅವರುಗಳು ಕೇರಳ ರಾಜ್ಯದ ಕಣ್ಣೂರು ಎಂಬಲ್ಲಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.











0 comments:
Post a Comment