ಬಂಟ್ವಾಳ, ಸೆಪ್ಟೆಂಬರ್ 08, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸಜಿಪಮುನ್ನೂರು ಗ್ರಾಮದ ಆಲಾಡಿ-ಬಾಳಿಕೆ ನಿವಾಸಿ ಅಬ್ದುಲ್ ಕರೀಂ ಅವರು ನೇಮಕಗೊಂಡಿದ್ದಾರೆ.
ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಚಂದ್ರಶೇಖರ ಭಂಡಾರಿ ಅವರು ಉದ್ಯಮಿ ಅಬ್ದುಲ್ ಕರೀಂ ಅವರನ್ನು ನೇಮಕಗೊಳಿಸಿ ಆದೇಶಿಸಿದ್ದಾರೆ.










0 comments:
Post a Comment