ಕಟ್ಟಡ ನಿರ್ಮಾಣ ಕಾರ್ಮಿಕರ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಸೆ 10 ರಂದು ಮಂಗಳೂರಿನಲ್ಲಿ ಅದಾಲತ್ - Karavali Times ಕಟ್ಟಡ ನಿರ್ಮಾಣ ಕಾರ್ಮಿಕರ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಸೆ 10 ರಂದು ಮಂಗಳೂರಿನಲ್ಲಿ ಅದಾಲತ್ - Karavali Times

728x90

3 September 2026

ಕಟ್ಟಡ ನಿರ್ಮಾಣ ಕಾರ್ಮಿಕರ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಸೆ 10 ರಂದು ಮಂಗಳೂರಿನಲ್ಲಿ ಅದಾಲತ್

ಮಂಗಳೂರು, ಸೆಪ್ಟೆಂಬರ್ 03, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಫಲಾನುಭವಿಗಳ ನೋಂದಣಿ, ನವೀಕರಣ ಮತ್ತು ವಿವಿಧ ಬಗೆಯ ಸೌಲಭ್ಯಗಳನ್ನು ಕೋರಿ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಗೆ ಸಲ್ಲಿಸಿರುವ ಅರ್ಜಿಗಳ ಸಂಬಂಧ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಂಚಾಡಿ ಶರ್ಬತ್ ಕಟ್ಟೆ ಕಾರ್ಮಿಕ ಭವನದಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ ನ್ಯಾಯಾಲಯ ಕೊಠಡಿಯಲ್ಲಿ ಅದಾಲತ್ ನಡೆಸಲಾಗುತ್ತದೆ.

ಕಟ್ಟಡ ಕಾರ್ಮಿಕ ಫಲಾನುಭವಿಗಳು ಅದಾಲತ್ತಿನ ಪ್ರಯೋಜನ ಪಡೆಯುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕಟ್ಟಡ ನಿರ್ಮಾಣ ಕಾರ್ಮಿಕರ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಸೆ 10 ರಂದು ಮಂಗಳೂರಿನಲ್ಲಿ ಅದಾಲತ್ Rating: 5 Reviewed By: karavali Times
Scroll to Top