ತುಳು ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಮಂಗಳೂರು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು : ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ - Karavali Times ತುಳು ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಮಂಗಳೂರು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು : ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ - Karavali Times

728x90

10 September 2026

ತುಳು ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಮಂಗಳೂರು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು : ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ

ಮಂಗಳೂರು, ಸೆಪ್ಟೆಂಬರ್ 10, 2026 (ಕರಾವಳಿ ಟೈಮ್ಸ್) : ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕೆಂಬ ತುಳುವರ ಒಕ್ಕೊರಳ ಬೇಡಿಕೆಯನ್ನು ಪರಿಗಣಿಸಿ ಸೆಪ್ಟೆಂಬರ್ 18 ರಂದು ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಈ ಬಗ್ಗೆ ನಾನು ಶಾಸಕನಾದಾಗಿನಿಂದಲೂ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ತುಳು ಪರ ಹೋರಾಟಗಾರರೊಂದಿಗೆ ತುಳು ಲಿಪಿ ಶಾಸನ, ಸಾವಿರಾರು ವರ್ಷಗಳ ಇತಿಹಾಸವಿರುವ ತಾಳೆ ಓಲೆಗಳು, ಪಾಡ್ದನ, ದೈವಾರಾಧನೆಯ ನುಡಿಗಳು, ತುಳುನಾಡಿನ ಪುರಾತನ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಬಳಕೆಯಾದ ತುಳು ಭಾಷೆಯ ಸಂಸ್ಕಾರ, ತುಳು ಸಾಹಿತ್ಯ, ತುಳು ಕ್ಯಾಲೆಂಡರ್, ತುಳು ಪತ್ರಿಕೆ, ಸೇರಿದಂತೆ ಅನೇಕ ಪೂರಕ ದಾಖಲೆಗಳನ್ನು ಹೊಂದಿಸಿಕೊಂಡು ಸರ್ಕಾರಕ್ಕೆ ಪ್ರಸ್ತುತ ಪಡಿಸಲಾಗಿತ್ತು. ಅಂದು ಸಚಿವರಾಗಿದ್ದ ಸುನಿಲ್ ಕುಮಾರ್ ಕಾರ್ಕಳ ಅವರು ಡಾ. ಮೋಹನ್ ಆಳ್ವರ ಸಮಿತಿಯನ್ನೂ ರಚಿಸಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಸಮಿತಿಯ ವರದಿ ಅನುಷ್ಠಾನಕ್ಕೆ ಬರದಿರುವುದು ಬೇಸರದ ಸಂಗತಿ ಎಂದವರು ಹೇಳಿದ್ದಾರೆ. 

ತುಳುವರ ಹೋರಾಟ, ಒತ್ತಾಸೆಗೆ ಅನುಗುಣವಾಗಿ ಬಹುತೇಕ ಕೆಲಸಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಪೂರ್ಣಗೊಂಡಿದ್ದು, ಕೊನೆಯ ಹಂತದ ಕಾರ್ಯಗಳು ಮಾತ್ರ ಬಾಕಿ ಇವೆ. ಅದನ್ನು ಶೀಘ್ರದಲ್ಲಿ ಮುಗಿಸುವ ನಿಟ್ಟಿನಲ್ಲಿ ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲೇ ಅಂತಿಮ ನಿರ್ಣಯವಾಗಬೇಕೆಂದು ಶಾಸಕ ಕಾಮತ್ ಸರಕಾರಕ್ಕೆ ಒತ್ತಾಯಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತುಳು ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಮಂಗಳೂರು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕು : ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ Rating: 5 Reviewed By: karavali Times
Scroll to Top